Breaking News
ಕೌಟುಂಬಿಕ ಕಲಹ; ವಿರಾಜಪೇಟೆಯಲ್ಲಿ ಸಹೋದರಿಯರ ಆತ್ಮಹತ್ಯೆ
ವಿರಾಜಪೇಟೆ : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನಾಮೇರ ಉದಯ ಎಂಬುವವರ ಪುತ್ರಿಯರಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಕ್ಕ ತಂಗಿಯರು.
ದಮಯಂತಿ ಹಳ್ಳಿಗಟ್ಟು ಸಿಇಟಿ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಮತ್ತು ಹರ್ಷಿತಾ ಗೋಣಿಕೊಪ್ಪ ಕಾವೇರಿ ಕಾಲೇಜ್ ನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿದ್ದಳು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.